ಈಗ ಬಂದ ಸುದ್ದಿ: ಡಿಕೆಶಿ ಅರೆಸ್ಟ್ ಆದ ಬೆನ್ನಲ್ಲೇ 'ಕುಮಾರಸ್ವಾಮಿಗೂ ಬಂತು ಬಿಗ್ ಶಾಕ್'!! ಎಚ್ ಡಿಕೆ ವಿರುದ್ಧ 'ಬಾಂಬ್ ಸಿಡಿಸಿದ ಜೆಡಿಎಸ್ ಶಾಸಕ'!

ತುಮಕೂರು, ಸೆಪ್ಟೆಂಬರ್ 12: ಸಮ್ಮಿಶ್ರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಗುಬ್ಬಿ ಜೆಡಿಎಸ್ ಶಾಸಕ ಎಸ್‌ ಆರ್ ಶ್ರೀನಿವಾಸ್ ಅವರು ತಮ್ಮದೇ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ.

ಕುಮಾರಸ್ವಾಮಿ ಅವರಿಗೆ ಇ.ಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಮೇಲೆ ಪ್ರೀತಿ ಇಲ್ಲ. ಪ್ರೀತಿ ಇದ್ದಿದ್ದರೆ ಅವರು ಒಕ್ಕಲಿಗ ಸಮುದಾಯ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದರು ಎಂದು ಎಸ್ ಆರ್ ಶ್ರೀನಿವಾಸ್ ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ಪರ ಪ್ರತಿಭಟನೆ : ಎಚ್‌ಡಿಕೆ ಗೈರಾಗಿದ್ದು ಏಕೆ?

ಡಿಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಬೆಂಗಳೂರಿನಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು, ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದರು. ಆದರೆ ಅದರಲ್ಲಿ ಕುಮಾರಸ್ವಾಮಿ ಅವರು ಪಾಲ್ಗೊಂಡಿರಲಿಲ್ಲ. ತಮಗೆ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಮಂತ್ರಣ ನೀಡಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು.

ಅಮಂತ್ರಣ ಕೊಟ್ಟು ಕರೆಯುವ ಕಾರ್ಯಕ್ರಮವಲ್ಲ
ಪ್ರೀತಿ ಇದ್ದಿದ್ದರೆ ಎಚ್‌ಡಿಕೆ ಬರುತ್ತಿದ್ದರು

'ಕುಮಾರಸ್ವಾಮಿ ಅವರು ಪ್ರತಿಭಟನೆಗೆ ಬರಬೇಕು ಎಂದೇನೂ ಇಲ್ಲ. ನಮ್ಮ ಸಮುದಾಯದ ಮುಖಂಡನಿಗೆ ಅನ್ಯಾಯವಾದಾಗ ಪ್ರತಿಭಟಿಸುವುದು ನಮ್ಮ ಕರ್ತವ್ಯ. ನಮಗೆಲ್ಲರಿಗೂ ಡಿಕೆ ಶಿವಕುಮಾರ್ ಅವರ ಮೇಲೆ ಪ್ರೀತಿ ಇತ್ತು. ಹಾಗಾಗಿ ಹೋಗಿದ್ದೆವು. ಕುಮಾರಸ್ವಾಮಿ ಅವರಿಗೆ ಆ ಭಾವನೆ ಇರಲಿಲ್ಲ. ಆ ಭಾವನೆ ಇದ್ದಿದ್ದರೆ ಖಂಡಿತವಾಗಿಯೂ ಹೋರಾಟಕ್ಕೆ ಬರುತ್ತಿದ್ದರು. ಆಮಂತ್ರಣ ಕೊಟ್ಟು ಕರೆಯುವ ಕಾರ್ಯಕ್ರಮ ಇದಲ್ಲ. ಆಮಂತ್ರಣ ಇಲ್ಲದೆಯೇ 25,000 ಮಂದಿ ಭಾಗವಹಿಸಿದ್ದರು' ಎಂದು ಎಸ್ ಆರ್ ಶ್ರೀನಿವಾಸ್ ಟೀಕಿಸಿದರು.

Comments

  1. Kukarswamy jyatyateetha jananayaka yavdo jyathi kattikondu horata madidre CM ge yellinda bele sigutte

    ReplyDelete
  2. Kumarswamy jyatyateetha jananayaka yavdo jyathi kattikondu horata madidre CM ge yellinda bele sigutte

    ReplyDelete

Post a Comment