ಇದೀಗ ಬಂದ ಸುದ್ದಿ:ಎಸ್.ಟಿ.ಸೋಮಶೇಖರ್ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿ ಮೇಲೆ ಕಿಡಿಕಾರಿದ್ದಾರೆ.ಇವರಿಬ್ಬರ ನಡುವೆ ನೂರಕ್ಕೆ ನೂರರಷ್ಟು ಹೊಂದಾಣಿಕೆ ಇಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.ಮತ್ತು ಕಾಂಗ್ರೆಸ್ ಮೇಲೆ ಈ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನೂರಕ್ಕೆ ನೂರರಷ್ಟು ಹೊಂದಾಣಿಕೆ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕಿಡಿಕಾರಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಸಚಿವರಲ್ಲಿ ಹೊಂದಾಣಿಕೆ ಇಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ. ನಮ್ಮಲ್ಲಿ ಎಲ್ಲ ಮಂತ್ರಿಗಳ ನಡುವೆ ಹೊಂದಾಣಿಕೆ ಇದೆ. ಬಿಜೆಪಿ ಸರ್ಕಾರ ಎಲ್ಲ ಮಂತ್ರಿಗಳು ಒಂದಾಗಿ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇವೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಇದೆಯಾ ಎಂದು ಪ್ರಶ್ನಿಸಿದ ಅವರು ನೂರಕ್ಕೆ ನೂರರಷ್ಟು ಅವರ ನಡುವೆ ಹೊಂದಾಣಿಕೆ ಇಲ್ಲ ಎಂದು ಕಿಡಿಕಾರಿದರು. ಸಿದ್ದರಾಮಯ್ಯ ಅವರು, ಕೊರೊನಾ ವಿಚಾರದಲ್ಲಿ ನಾವು ಖರ್ಚು ಮಾಡಿರುವ ಹಣದಲ್ಲಿ ಅವ್ಯವಾಹರ ಆಗಿದೆ ಎಂದು ಹೇಳುತ್ತಿದ್ದಾರೆ. ಖರ್ಚು ಮಾಡಿರುವ ಹಣವೇ ಕಡಿಮೆ. ಹೀಗಿರುವಾಗ ಹೆಚ್ಚಿನ ಹಣದ ಅವ್ಯವಹಾರ ಆಗಿದೆ ಅಂದರೆ ಹೇಗೆ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಪ್ರಚಾರಕ್ಕಾಗಿ ಲೆಕ್ಕಕೊಡಿ, ಲೆಕ್ಕಕೊಡಿ ಅಂತಿದ್ದಾರೆ. ಲೆಕ್ಕ ಕೊಡಲು ನಾವು ಸಿದ್ಧರಿದ್ದರೂ ಲೆಕ್ಕ ತೆಗೆದುಕೊಳ್ಳಲು ಸಿದ್ದರಾಮಯ್ಯ ಸಿದ್ಧರಿಲ್ಲ ಎಂದು ತಿರುಗೇಟು ನೀಡಿದರು.
ಮಂತ್ರಿ ಮಾಡುವುದು, ಮಂತ್ರಿ ಮಂಡಲದಿಂದ ತೆಗೆಯುವುದು ಸಿಎಂ ಅವರ ಪರಮಾಧಿಕಾರ. ಈಗ ನಾವು ರಾಜೀನಾಮೆ ಕೊಡುವ ಪ್ರಮೇಯ ಬರುವುದಿಲ್ಲ. ರಾಜೀನಾಮೆ ಕೊಟ್ಟ ಕೆಲವರಿಗೆ ಎಂಎಲ್‍ಸಿ ಮಾಡಿದ್ದಾರೆ. ಸಿಎಂ ಯಾರಿಗೆ ಏನು ಮಾಡಬೇಕೋ ಅದನ್ನು ಮಾಡಿದ್ದಾರೆ ಎಂದರು.

Comments