ಇಂದು ಡಾ. ಬಾಬು ಜಗಜೀವನರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಬಿ.ಎಸ್ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತಾಡಿದರು. ಸಿದ್ದರಾಮಯ್ಯ ಸುಖಾಸುಮ್ಮನೇ ಆರೋಪ ಮಾಡುವುದು ಬೇಡ. ದಾಖಲೆಯೊಂದಿಗೆ ಮಾತಾಡಲಿ. ಯಾವುದೇ ಅಧಿಕಾರಿ ತಪ್ಪು ಮಾಡಿದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇನ್ನು, ಸಿದ್ದರಾಮಯ್ಯ ಆರೋಪಕ್ಕೆ ನಾನು ಇನ್ನೂ ಉತ್ತರ ನೀಡಿಲ್ಲ. ನೀವು ಕೇಳುತ್ತಿರುವುದಕ್ಕೆ ನಾನು ಹೇಳುತ್ತಿದ್ದೇನೆ. ಕೋವಿಡ್-19 ಉಪಕರಣಗಳ ಖರೀದಿಯಲ್ಲಿ ನಡೆದ ಭ್ರಷ್ಟಚಾರದ ಬಗ್ಗೆ ದಾಖಲೆ ನೀಡಲಿ, ಯಾರೇ ತಪ್ಪು ಮಾಡಿದರೇ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಪುನರುಚ್ಚರಿಸಿದರು.
ಹೀಗೆ ಮುಂದುವರಿದ ಬಿಎಸ್ ಯಡಿಯೂರಪ್ಪ, ಯಾರು ಕೂಡ ಬೆಂಗಳೂರು ಬಿಟ್ಟು ಹೋಗಬೇಡಿ. ನೀವು ಕೊರೋನಾ ಜೊತೆಗೆ ಬದುಕಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಸರ್ಕಾರದೊಂದಿಗೆ ಬೆಂಗಳೂರಿನ ಜನ ಸಹಕರಿಸಿ ಎಂದು ಮನವಿ ಮಾಡಿದರು ಬಿಎಸ್ವೈ.
Comments
Post a Comment