ಕಾಂಗ್ರೆಸ್ ವ್ಯಕ್ತಿಕೇಂದ್ರಿತ ಪಕ್ಷವಾಗಿದ್ದು ಬಿಜೆಪಿ ಕೇಡರ್ ಆಧಾರಿತ ಪಕ್ಷವಾಗಿದೆ. ಕಾಂಗ್ರೆಸ್ ಎಂಬ ಮುಳಗುವ ಹಡುಗನ್ನು ಡಿಕೆಶಿ ಹತ್ತಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಎಲ್ಲಾ ಕಾಂಗ್ರೆಸ್ ನಾಯಕರು ಸೇರಿಕೊಂಡು ಡಿ.ಕೆ ಶಿವಕುಮಾರ್ ಅವರನ್ನು ಮುಳುಗಿಸುತ್ತಾರೆ ಕಾದುನೋಡಿ ಎಂದು ನಳಿನ್ ಕುಮಾರ್ ಕಟೀಲ್ ಕುಟುಕಿದ್ದಾರೆ.
ಜುಲೈ 2 ರಂದು ಡಿಕೆ ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಕೆಪಿಸಿಸಿ ನೂತನ ಕಚೇರಿಯಲ್ಲಿ ಅದ್ದೂರಿಯಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ್ದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ಘೋಷಣೆಯನ್ನು ಮಾಡಿದ್ದರು.

Comments
Post a Comment