ರಾಜ್ಯದಲ್ಲಿ ಸಂಘಟನೆ ಬಲಪಡಿಸಲು ಬಿಜೆಪಿ ಮಹತ್ವದ ಹೆಜ್ಜೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸ್ವಂತ ಕಚೇರಿ ನಿರ್ಮಾಣಕ್ಕೆ ಬಿಜೆಪಿ ಮುಂದಾಗಿದೆ. ರಾಜ್ಯದ ಕೆಲವೆಡೆ ಶಾಸಕರು, ಸಂಸದರ ಒಡೆತನದ ಕಟ್ಟಡಳಲ್ಲಿ ಬಿಜೆಪಿ ಕಚೇರಿಗಳು ಇದ್ದು, ಅಂತಹ ಎಲ್ಲಾ ಕಚೇರಿಗಳನ್ನ ಖಾಲಿ ಮಾಡಿಸಿ, ಹೊಸ ಕಚೇರಿ ನಿರ್ಮಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವರ್ಚ್ಯವಲ್ ಸಭೆ ಮೂಲಕ ಉದ್ಘಾಟಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಎರಡ್ಮೂರು ವರ್ಷಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸುವ ಯೋಜನೆ ಹಾಕಿಕೊಂಡಿದ್ದೇವೆ ಎಂದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ವಿಜಯಪುರ, ರಾಯಚೂರು, ಬಳ್ಳಾರಿ, ಬೀದರ್, ಬಾಗಲಕೋಟೆ, ಕೋಲಾರ, ಚಾಮರಾಜನಗರ ಮತ್ತು ತಿಪಟೂರಿನಲ್ಲಿ ಕಾರ್ಯಾಲಯ ಆರಂಭವಾಗುತ್ತಿವೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಹಾವೇರಿ, ರಾಮನಗರ, ಉತ್ತರ ಕನ್ನಡ ಸೇರಿದಂತೆ ಒಟ್ಟು 11 ಕಡೆ ಕಾರ್ಯಾಲಯಗಳನ್ನು ಪ್ರಾರಂಭಿಸಲಾಗುವುದು. ಈ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಇರುವ ಕಾರಣ ಭೂಮಿ ಖರೀದಿ ವಿಳಂಬವಾಗಿದೆ. ಒಂದೆರಡು ತಿಂಗಳಲ್ಲಿ ಇದು ಕೂಡ ಪೂರ್ಣಗೊಳ್ಳಲಿದ್ದು, ಎರಡು- ಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಕಾರ್ಯಾಲಯಗಳು ಪ್ರಾರಂಭವಾಗಲಿವೆ ಎಂದು ಎಂದು ತಿಳಿಸಿದರು.

Comments
Post a Comment